ಮೂಲಸೌಕರ್ಯಕ್ಕೆ ಒತ್ತು ನೀಡುವ ಬಿಜೆಪಿ ಮುನ್ನೋಟ ಪತ್ರ ಬಿಡುಗಡೆ
Tuesday, April 21st, 2009
ಬೆಂಗಳೂರು(ಏ.೨೧)- ರಾಷ್ಟ್ರೀಯ ಪ್ರಾಮುಖ್ಯತೆಯ ನೂರಕ್ಕೂ ಹೆಚ್ಚು ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಿಜೆಪಿ ಕಾರ್ಯಸೂಚಿಯನ್ನು ಪಕ್ಷದ ಪ್ರಧಾನ ಮಂತ್ರಿ ಅಭ್ಯರ್ಥಿ ಎಲ್.ಕೆ.ಅಡ್ವಾಣಿ ಇಂದು ಬಿಡುಗಡೆ ಮಾಡಿದರು. ಕಾರ್ಯಸೂಚಿ ಬಿಡುಗಡೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಲ್.ಕೆ.ಅಡ್ವಾಣಿಯವರು, ಎಲ್ಲ ವರ್ಗದ ಹಿತದೃಷ್ಟಿಯ ಬಿಜೆಪಿ ಪ್ರಣಾಳಿಕೆಯನ್ನು ಬಹುತೇಕ ಎಲ್ಲರೂ ಸ್ವಾಗತಿಸಿದ್ದಾರೆ. ಮಾಹಿತಿ ತಂತ್ರಜ್ಙಾನ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಿ ಕಾರ್ಯಸೂಚಿ ಬಿಡುಗಡೆ ಮಾಡಿರುವಂತೆ, ದೇಶದ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುವ ಮೂಲಸೌಕರ್ಯಕ್ಕೂ ಒತ್ತು ನೀಡುವ ಕಾರ್ಯಸೂಚಿ ಇದಾಗಿದೆ. ಈ ಕಾರ್ಯಸೂಚಿಯಂತೆ ಎನ್ಡಿಎ ಅಧಿಕಾರಕ್ಕೆ [...]








